Skip to main content

ಗುವಾಹಾಟಿಗೆ ಆಗಮಿಸಿದ ಶ್ರೀಲಂಕಾ ಕ್ರಿಕೆಟ್ ತಂಡ

ಗುವಹಾಟಿಗೆ ಆಗಮಿಸಿದ ಶ್ರೀಲಂಕಾ ಕ್ರಿಕೆಟ್ ತಂಡ

ಗುವಾಹಟಿ

ಗುವಾಹಟಿ: ಭಾರತ ವಿರುದ್ಧ ಮೂರು ಪಂದ್ಯಗಳ ಟಿ-20 ಸರಣಿ ಆಡಲು ಲಸಿತ್ ಮಲಿಂಗಾ ನಾಯಕತ್ವದ ಶ್ರೀಲಂಕಾ ತಂಡ ಬಿಗಿ ಪೊಲೀಸ್ ಭದ್ರತೆಯೊಂದಿಗೆ ಗುರುವಾರ ಅಸ್ಸಾಂನ ಗುವಾಹಟಿಗೆ ಆಗಮಿಸಿದೆ. ಕಳೆದ ತಿಂಗಳು ಪೌರತ್ವ ಕಾಯಿದೆ ವಿರುದ್ಧ ಇಲ್ಲಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆದಿತ್ತು. ಈ ಹಿನ್ನೆೆಲೆಯಲ್ಲಿ ಬಿಗಿ ಪೊಲೀಸ್ ಭದ್ರತೆಯೊಂದಿಗೆ ಶ್ರೀಲಂಕಾ ತಂಡ ನೇರವಾಗಿ ಹೊಟೇಲ್‌ಗೆ ಆಗಮಿಸಿತು.

ಎರಡನೇ ಟೆಸ್ಟ್ ಪಂದ್ಯಕ್ಕೆ ಜೊಪ್ರಾ ಆರ್ಚರ್ ಡೌಟ್

ಎರಡನೇ ಟೆಸ್ಟ್ ಪಂದ್ಯಕ್ಕೆ ಜೋಫ್ರಾ ಆರ್ಚರ್‌ ಡೌಟ್

ಜಾಫ್ರಾ

ಕೇಪ್‌ ಟೌನ್: ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಅಚ್ಚರಿಯ ಸೋಲುಂಡ ಇಂಗ್ಲೆಂಡ್‌ ತಂಡಕ್ಕೆ, ಇದೀಗ ಸರಣಿಯ 2ನೇ ಪಂದ್ಯದ ಆರಂಭಕ್ಕೂ ಮೊದಲೇ ಭಾರಿ ಆಘಾತ ಎದುರಾಗುವ ಸಾಧ್ಯತೆ ಇದೆ. ಇಂಗ್ಲೆಂಡ್‌ ತಂಡದ ಮುಖ್ಯ ವೇಗದ ಬೌಲರ್‌ ಜೋಫ್ರಾ ಆರ್ಚರ್‌ ಮೊಣಕೈ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಜ.3ರಂದು ಇಲ್ಲಿ ಆರಂಭವಾಗಲಿರುವ 4 ಪಂದ್ಯಗಳ ಟೆಸ್ಟ್‌ ಕ್ರಿಕೆಟ್‌ ಸರಣಿಯ 2ನೇ ಪಂದ್ಯದಲ್ಲಿ ಆಡುವುದು ಅನುಮಾನವಾಗಿದೆ.

Subscribe to SPORTS