Skip to main content
ಡಾರ್ಲಿಂಗ್ ಕೃಷ್ಣ ಅಭಿನಯದ ನೂತನ ಚಿತ್ರಕ್ಕೆ ಶಿವತೇಜಸ್ ನಿರ್ದೇಶನ.

ಡಾರ್ಲಿಂಗ್ ಕೃಷ್ಣ ಅಭಿನಯದ ನೂತನ ಚಿತ್ರಕ್ಕೆ ಶಿವತೇಜಸ್ ನಿರ್ದೇಶನ.

ಡಾರ್ಲಿಂಗ್ ಕೃಷ್ಣ ಅಭಿನಯದ ನೂತನ ಚಿತ್ರಕ್ಕೆ ಶಿವತೇಜಸ್ ನಿರ್ದೇಶನ.

ಡಾರ್ಲಿಂಗ್ ಕೃಷ್ಣ ಅಭಿನಯದ ನೂತನ ಚಿತ್ರಕ್ಕೆ ಶಿವತೇಜಸ್ ನಿರ್ದೇಶನ.

ಸುಮಂತ್ ಕ್ರಾಂತಿ ನಿರ್ಮಾಣದ ಈ ಚಿತ್ರಕ್ಕೆ ಮಂಜುನಾಥನ‌ ಸನ್ನಿಧಿಯಲ್ಲಿ ಸ್ಕ್ರಿಪ್ಟ್ ಪೂಜೆ. ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಸ್ಕ್ರಿಪ್ಟ್ ಪೂಜೆ ಧರ್ಮಸ್ಥಳದ ಶ್ರೀಮಂಜುನಾಥನ ಸನ್ನಿಧಿಯಲ್ಲಿ ನಡೆದಿದೆ. "ಮಳೆ" ಚಿತ್ರದ ಖ್ಯಾತಿಯ ಶಿವತೇಜಸ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ರಶ್ಮಿ ಫಿಲಂಸ್ ಮೂಲಕ ಸುಮಂತ್ ಕ್ರಾಂತಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. "ಕಾಲಚಕ್ರ" ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸಿರುವ ಸುಮಂತ್ ಕ್ರಾಂತಿ ಅವರು ಪ್ರಜ್ವಲ್ ದೇವರಾಜ್ ನಟನೆಯ ಚಿತ್ರವೊಂದನ್ನು ನಿರ್ಮಾಣ ಮಾಡುತ್ತಿದ್ದಾರೆ. ಇದು ಅವರ ನಿರ್ಮಾಣದ ಮೂರನೇ ಚಿತ್ರ. ಬರ್ಕ್ಲಿ ಚಿತ್ರವನ್ನು ಸುಮಂತ್ ಕ್ರಾಂತಿ ನಿರ್ದೇಶಿಸಿದ್ದಾರೆ. ಅರ್ಜುನ್ ಜನ್ಯರ ಸಂಗೀತ ಈ ನೂತನ ಚಿತ್ರಕ್ಕಿರಲಿದೆ. ಸದ್ಯದಲ್ಲೇ ಚಿತ್ರದ ಬಗ್ಗೆ ಹಚ್ಚಿನ ಮಾಹಿತಿ ನೀಡುವುದಾಗಿ ಸುಮಂತ್ ಕ್ರಾಂತಿ ತಿಳಿಸಿದ್ದಾರೆ.

Add new comment

Plain text

  • No HTML tags allowed.
  • Lines and paragraphs break automatically.
  • Web page addresses and email addresses turn into links automatically.