Skip to main content
ವಿಜಯ್ ಪ್ರಕಾಶ್ ಕಂಠಸಿರಿಯಲ್ಲಿ  "ಕಡಲ ತೀರದ ಭಾರ್ಗವ" ಚಿತ್ರದ ಹಾಡು.

ವಿಜಯ್ ಪ್ರಕಾಶ್ ಕಂಠಸಿರಿಯಲ್ಲಿ "ಕಡಲ ತೀರದ ಭಾರ್ಗವ" ಚಿತ್ರದ ಹಾಡು.

ವಿಜಯ್ ಪ್ರಕಾಶ್ ಕಂಠಸಿರಿಯಲ್ಲಿ "ಕಡಲ ತೀರದ ಭಾರ್ಗವ" ಚಿತ್ರದ ಹಾಡು.

ವಿಜಯ್ ಪ್ರಕಾಶ್ ಕಂಠಸಿರಿಯಲ್ಲಿ  "ಕಡಲ ತೀರದ ಭಾರ್ಗವ" ಚಿತ್ರದ ಹಾಡು.

ಡಾ||ವಿ.ನಾಗೇಂದ್ರ ಪ್ರಸಾದ್ ಬರೆದಿರುವ ಹಾಡಿಗೆ ಭಾರಿ ಮೆಚ್ಚುಗೆ. ವಿಭಿನ್ನ ಕಥಾಹಂದರ ಹೊಂದಿರುವ "ಕಡಲ ತೀರದ ಭಾರ್ಗವ" ಚಿತ್ರಕ್ಕಾಗಿ ಡಾ||ವಿ.ನಾಗೇಂದ್ರ ಪ್ರಸಾದ್ ಬರೆದಿರುವ "ಸಮಯವೆ" ಎಂಬ ಹಾಡನ್ನು ಖ್ಯಾತ ಗಾಯಕ ವಿಜಯ್ ಪ್ರಕಾಶ್ ಹಾಡಿರುವ ಈ ಹಾಡು ಎ ಆರ್ ಪಿ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ.

ಅನಿಲ್ ಸಿ.ಜೆ ಸಂಗೀತ ನೀಡಿರುವ ಈ ಹಾಡಿಗೆ ಅಪಾರ ಮೆಚ್ಚುಗೆ ಕೂಡ ವ್ಯಕ್ತವಾಗಿದೆ. ಚಿತ್ರದ ನಾಯಕರಲ್ಲೊಬ್ಬರಾದ ಭರತ್ ಅವರನ್ನು ಪರಿಚಯಯಿಸುವ ಗೀತೆಯಾಗಿ ಈ ಹಾಡು ಮೂಡಿಬಂದಿದೆ. ಸದ್ಯದಲ್ಲೇ ಚಿತ್ರದ ಮತ್ತೊಂದು ಟ್ರೇಲರ್ ಬಿಡುಗಡೆಯಾಗಲಿದ್ದು, ಜನವರಿಯಲ್ಲಿ ಚಿತ್ರ ತೆರೆಗೆ ಬರುವ ಸಾಧ್ಯತೆಯಿದೆ. ಏವಕಲ ಸ್ಟುಡಿಯೋ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ವರುಣ್ ರಾಜು ಪಟೇಲ್ ಹಾಗೂ ಭರತ್ ಗೌಡ ಈ ಚಿತ್ರದ ನಿರ್ಮಾಪಕರು. ವಿಜಯಂ ವಜ್ರ ವೆಂಕ್ಚರ್ಸ್ ಸಹ ನಿರ್ಮಾಣ ಈ ಚಿತ್ರಕ್ಕಿದೆ. ನಿರ್ಮಾಪಕರಾದ ಭರತ್ ಗೌಡ ಹಾಗೂ ವರುಣ್ ರಾಜು ಪಟೇಲ್ ಈ ಚಿತ್ರದ ನಾಯಕರಾಗೂ ಅಭಿನಯಿಸಿದ್ದಾರೆ.

ಶೃತಿ ಪ್ರಕಾಶ್ ಈ ಚಿತ್ರದ ನಾಯಕಿ. ಈಟಿವಿ ಶ್ರೀಧರ್, ರಾಘವ್ ನಾಗ್ , ಅಶ್ವಿನ್ ಹಾಸನ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಬೆಂಗಳೂರು, ಉಡುಪಿ, ಮುರುಡೇಶ್ವರ ಹಾಗೂ ಇನ್ನಿತರ ಕರಾವಳಿಯ ಕಡಲತೀರಗಳಲ್ಲಿ ಈ ಚಿತ್ರದ ಚಿತ್ರೀಕರಣ ನಡೆದಿದೆ. ಪನ್ನಗ ಸೋಮಶೇಖರ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಅನಿಲ್ ಸಿ ಜೆ ಸಂಗೀತ ನಿರ್ದೇಶನ, ಕೀರ್ತನ್ ಪೂಜಾರ್ ಛಾಯಾಗ್ರಹಣ ಹಾಗೂ ಆಶಿಕ್ ಕುಸುಗೊಳ್ಳಿ , ಉಮೇಶ್ ಭೋಸಗಿ ಅವರ ಸಂಕಲನವಿದೆ.

Add new comment

Plain text

  • No HTML tags allowed.
  • Lines and paragraphs break automatically.
  • Web page addresses and email addresses turn into links automatically.