ಕಾನೂನನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು - ಶಿವಕುಮಾರ ನಾಯಕ ದಿನ್ನಿ ವಕೀಲರು
ಕಾನೂನನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು - ಶಿವಕುಮಾರ ನಾಯಕ ದಿನ್ನಿ ವಕೀಲರು.
ರಾಯಚೂರು : ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪೋಲಿಸ್ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ವಕೀಲರ ಸಂಘ, ವಾರ್ತಾ ಮತ್ತು ಪ್ರಸಾರ ಇಲಾಖೆ ಸೇರಿ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ರಾಯಚೂರು ತಾಲೂಕಿನ ಉಡಮಗಲ್ ನಲ್ಲಿ ಹಮ್ಮಿಕೊಂಡಿದ್ದ ಕಾನೂನುಗಳ ಅರಿವು ಮತ್ತು ನೆರವು ಕಾರ್ಯಕ್ರಮವನ್ನು ಉದ್ಘಾಟಸಿ ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಯ ಶಿವಕುಮಾರ ನಾಯಕ ದಿನ್ನಿ ಮಾತನಾಡಿ ಕಾನೂನಿನಲ್ಲಿ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಇದೆ ಪ್ರತಿಯೊಬ್ಬರೂ ಈ ದೇಶದ ಎಲ್ಲಾ ಕಾನೂನುಗಳನ್ನು ಅಗತ್ಯವಾಗಿ ಸರಿಯಾದ ರೀತಿಯಲ್ಲಿ ಅರಿತುಕೊಳ್ಳಬೇಕು.
ಏನೇ ಸಮಸ್ಯೆ ಇದ್ದರು ಕಾನೂನು ಸೇವಾ ಪ್ರಾಧಿಕಾರದ ಗಮನಕ್ಕೆ ತಂದರೆ ಆರ್ಹರಿಗೆ ಉಚಿತವಾದ ಕಾನೂನಿನ ಸಹಾಯವನ್ನು ನೀಡಲಾಗುವುದು ಇದನ್ನು ಸದುಪಯೋಗ ಪಡಿಸಿಕೊಂಡಾಗ ಮಾತ್ರ ಇಂತಹ ಕಾರ್ಯಕ್ರಮಕ್ಕೆ ಅರ್ಥ ಬರುತ್ತದೆ ಎಂದರು. ನಂತರ ವಿಶೇಷ ಉಪನ್ಯಾಸಕರಾಗಿ ಆಗಮಿಸಿದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಕ್ಕಳ ಹಕ್ಕುಗಳು ಹಾಗೂ ಅವರಿಗಾಗಿ ಇರುವ ವಿಶೇಷ ಕಾನೂನುಗಳನ್ನು ಕುರಿತು ಉಪನ್ಯಾಸ ನೀಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ವಕೀಲರಾದ ಶಿವಕುಮಾರ ಮ್ಯಾಗಳಮನಿ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರಾಜಶ್ರೀ, ಮುಖ್ಯೋಪಾಧ್ಯಾಯರಾದ ವಿರೇಶ ಅಂಗಡಿ ಕಾರ್ಯಕ್ರಮ ವನ್ನು ಕುರಿತು ಮಾತನಾಡಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡಮಗಲ್ ಗ್ರಾಮ ಪಂಚಾಯತಿ ಅಧ್ಯಕ್ಷರಾದ ದೇವೆಂದ್ರಪ್ಪ ವಹಿಸಿದ್ದರು. ವೇದಿಕೆಯ ಮೇಲೆ ಉಪಾಧ್ಯಕ್ಷ ರಮೇಶ, ಗ್ರಾಮ ಪಂಚಾಯತಿ ಸದಸ್ಯರಾದ ನರಸಪ್ಪ, ಸೇರಿ ವಿವಿಧ ಇಲಾಖೆಯ ಮುಖ್ಯಸ್ಥರಿದ್ದರು, ತಾಲೂಕು ಪಂಚಾಯತಿ ಸಹಾಯಕ ಅಧಿಕಾರಿ ರಾಜಗೋಪಾಲ ಪುರೋಹಿತ ಕಾರ್ಯಕ್ರಮವನ್ನು ನಿರೂಪಿಸಿದರು.
Recent comments