Skip to main content
ಮಾತಿನ ಭಾಗದ ಚಿತ್ರೀಕರಣ ಮುಗಿಸಿದ ʼಅಮರ ಪ್ರೇಮಿ ಅರುಣ್ʼ

ಮಾತಿನ ಭಾಗದ ಚಿತ್ರೀಕರಣ ಮುಗಿಸಿದ ʼಅಮರ ಪ್ರೇಮಿ ಅರುಣ್ʼ

ಮಾತಿನ ಭಾಗದ ಚಿತ್ರೀಕರಣ ಮುಗಿಸಿದ ʼಅಮರ ಪ್ರೇಮಿ ಅರುಣ್ʼ.

Kannada new film

ಒಲವು ಸಿನಿಮಾ ಸಂಸ್ಥೆಯು ನಿರ್ಮಿಸುತ್ತಿರುವ ʼಅಮರ ಪ್ರೇಮಿ ಅರುಣ್ʼ ಸಿನಿಮಾವು ತನ್ನ ಮಾತಿನ ದೃಶ್ಯಗಳ ಚಿತ್ರೀಕರಣವನ್ನು ಬಳ್ಳಾರಿ ನಗರ ಮತ್ತು ಬಳ್ಳಾರಿ ತಾಲೂಕಿನ ಸಿರಿವಾರ, ಕಪ್ಪಗಲ್ಲು ಗ್ರಾಮಗಳಲ್ಲಿ ಮುಗಿಸಿದೆ. ಜಯಂತ್ ಕಾಯ್ಕಿಣಿ ಮತ್ತು ಯೋಗರಾಜ್ ಭಟ್ ಅವರುಗಳು ಬರೆದಿರುವ ಹಾಡುಗಳ ಚಿತ್ರೀಕರಣಕ್ಕೆ ತಂಡ ಈಗ ತಯಾರಾಗುತ್ತಿದೆ. ನಾಯಕ ಹರಿಶರ್ವಾ, ನಾಯಕಿ ದೀಪಿಕಾ ಆರಾಧ್ಯ ಸೇರಿದಂತೆ ಧರ್ಮಣ್ಣ, ಭೂಮಿಕಾ ಭಟ್, ಮಹೇಶ್ ಬಂಗ್, ರಾಧಾ ರಾಮಚಂದ್ರ, ಚೆನ್ನಬಸಪ್ಪ, ಸುನಂದಾ ಹೊಸಪೇಟೆ, ಬಲರಾಜ್ವಾಡಿ, ರೋಹಿಣಿ, ವಿಜಯಲಕ್ಷ್ಮಿ, ಮಂಡ್ಯ ಮಂಜು, ರಾಜೇಶ್ವರಿ, ರಂಜಿತಾ ಮತ್ತು ಇನ್ನೂ ಅನೇಕ ಕಲಾವಿದರುಗಳ ನಟನೆಯಲ್ಲಿ ದೃಶ್ಯಗಳನ್ನು ಚಿತ್ರಿಸಲಾಗಿದೆ.

ʼಅಮರ ಪ್ರೇಮಿ ಅರುಣ್ʼ ಸಿನಿಮಾ ವಿಶೇಷ ಪಾತ್ರಗಳಲ್ಲಿ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾಗಿರುವ ಪದ್ಮಶ್ರೀ ಜೋಗತಿ ಮಂಜಮ್ಮನವರು ಮತ್ತು ಖ್ಯಾತ ರಂಗಕರ್ಮಿ ಹುಲಿಗೆಪ್ಪ ಕಟ್ಟಿಮನಿ ಅವರು ನಟಿಸಿದ್ದಾರೆ.

ಚಿತ್ರಕ್ಕೆ ಪ್ರವೀಣ್ ಕುಮಾರ್ ಜಿ ಅವರ ರಚನೆ-ನಿರ್ದೇಶನ, ಪ್ರವೀಣ್ ಎಸ್ ಅವರ ಛಾಯಾಗ್ರಹಣ, ಕಿರಣ್ ರವೀಂದ್ರನಾಥ್ ಅವರ ಸಂಗೀತ, ಮನು ಶೇಡ್ಗಾರ್ ಅವರ ಸಂಕಲನ, ಮಂಡ್ಯ ಮಂಜು ಅವರ ಕಾರ್ಯಕಾರಿ ನಿರ್ಮಾಣ ಮತ್ತು ಸುಧೀಂದ್ರ ವೆಂಕಟೇಶ್ ಅವರ ಮಾಧ್ಯಮ ಸಂಪರ್ಕವಿದೆ. ----*----

Add new comment

Plain text

  • No HTML tags allowed.
  • Lines and paragraphs break automatically.
  • Web page addresses and email addresses turn into links automatically.