ಫೆಬ್ರವರಿ 18ರಂದು ರಾಜ್ಯಾದ್ಯಂತ "ವರದ"ನ ಆಗಮನ
ಫೆಬ್ರವರಿ 18ರಂದು ರಾಜ್ಯಾದ್ಯಂತ "ವರದ"ನ ಆಗಮನ.
ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ "ವರದ" ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ. ಚಿತ್ರ ಫೆಬ್ರವರಿ 18ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. "ರಾಬರ್ಟ್" ಚಿತ್ರದ ನಂತರ ವಿನೋದ್ ಪ್ರಭಾಕರ್ ನಟಿಸಿರುವ ಈ ಚಿತ್ರ ಬಿಡುಗಡೆಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
ಉದಯ ಪ್ರಕಾಶ್ ನಿರ್ಮಿಸಿ, ನಿರ್ದೇಶಿಸಿರುವ ಈ ಚಿತ್ರದ ಸಹ ನಿರ್ಮಾಪಕರು ಸುನಿತಾ ಪ್ರಕಾಶ್. ಕೆ.ಕಲ್ಯಾಣ್ , ನಂದೀಶ್ ಹಾಗೂ ಚೇತನ್ ಕುಮಾರ್ ಈ ಚಿತ್ರದ ಹಾಡುಗಳನ್ನು ಬರೆದಿದ್ದು, ಪ್ರದೀಪ್ ವರ್ಮ ಸಂಗೀತ ನೀಡಿದ್ದಾರೆ. ವಿನಾಯಕರಾಮ್ ಸಂಭಾಷಣೆ ಬರೆದಿದ್ದಾರೆ. ಭಜರಂಗಿ ಆನಂದ್ ಛಾಯಾಗ್ರಹಣ, ವೆಂಕಿ ಯು ಡಿ ವಿ ಸಂಕಲನ, ಕಂಬಿ ರಾಜು ನೃತ್ಯ ನಿರ್ದೇಶನ ಹಾಗೂ ಡಿಫರೆಂಟ್ ಡ್ಯಾನಿ, ವಿಕ್ರಂ ಮೋರ್(ಕೆ ಜಿ ಎಫ್), ಅಶ್ರಫ್ ಗುರ್ಕಲ್ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ವಿನೋದ್ ಪ್ರಭಾಕರ್ ಅವರ ತಂದೆ ಪಾತ್ರದಲ್ಲಿ ಹಿರಿಯ ನಟ ಚರಣ್ ರಾಜ್ ನಟಿಸಿದ್ದಾರೆ.
ಅಮಿತ ಈ ಚಿತ್ರದ ನಾಯಕಿ. ಅನಿಲ್ ಸಿದ್ದು, ಎಂ.ಕೆ.ಮಠ, ಅಶ್ವಿನಿ ಗೌಡ, ಗಿರೀಶ್ ಜತ್ತಿ, ಪ್ರಶಾಂತ್ ಸಿದ್ದಿ, ರಾಧ ರಂಗನಾಥ್, ರಾಜೇಶ್ವರಿ, ದುರ್ಗ, ಮಾನಸ, ಅರವಿಂದ್, ರೋಬೊ ಗಣೇಶ್, ಲೋಕೇಶ್, ನಮನ, ರಾಮಸ್ವಾಮಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
Recent comments